Wednesday, June 20, 2007

ಆತ್ಮೀಯ ಆಹ್ವಾನ

ತುಂಗೆಯ ತೀರದಿಂದ ತಂದು ಮಲ್ಲಿಗೆ ಸಸಿಯೊಂದ
ಮನದ ಅಂಗಳದಿ ಹಚ್ಚಿ ಪ್ರೀತಿಯ ಸಿಂಚನ ಮಾಡಲು
ಅರಳಿದೆ ಮೊಗ್ಗು ನನ್ನ ಎದೆಯಂಗಳದಿ
ಪ್ರೀತಿಯ ಪರಿಮಳ ಬೀರಲಿದೆ ನನ್ನ ಮನೆಯಂಗಳದಿ

ಹೀಗೆ ನನ್ನ ಎದೆಯ ತುಂಬಾ ಮೋಹಕ ಸುವಾಸನೆ ಸೂಸುತ್ತಿರುವ ಆ ನನ್ನ ಮಧುರ ಮಲ್ಲಿಗೆಯ ಹೆಸರು ಶಿಲ್ಪಶ್ರೀ.

ಜೀವನದ ಎಲ್ಲಾ ವಸಂತ-ಗ್ರೀಷ್ಮ ಖುತುಗಳನ್ನು ಹಂಚಿಕೊಳ್ಳಲ್ಲಿರುವ ನನ್ನ ಪ್ರೀತಿಯ ಹುಡುಗಿಯನ್ನು ಬಾಳಸಂಗಾತಿಯಾಗಿ ಸ್ಪೀಕರಿಸುವ ಶುಭ ಮೂಹೂರ್ತಕ್ಕೆ ನಿಮಗೆ ಆತ್ಮೀಯ ಆಹ್ವಾನ

ಮುಹೂರ್ತ: ಭಾನುವಾರ ೨೪ ಜೂನ್ ೨೦೦೭, ಬೆಳಿಗ್ಗೆ ೧೦:೩೦ - ೧೧:೩೦
ಸ್ಥಳ: ವೀರಶೈವ ಕಲ್ಯಾಣ ಮಂದಿರ, ಶಿವಮೊಗ್ಗ

ಆರತಕ್ಷತೆ:ಶುಕ್ರವಾರ ೨೯ ಜೂನ್ ೨೦೦೭, ಸಂಜೆ ೭:೦೦ - ೧೦:೦೦
ಸ್ಥಳ:ನ್ಯೂ ಆತಿಥ್ಯ ರೆಸ್ಟೋರೆಂಟ್,ಗಾಂಧೀ ಬಜಾರ್,ಬೆಂಗಳೂರು

ಅಂದಾಗೆ ಇದರ ಜೊತೆ ಇನ್ನೊಂದು ಸಂಭ್ರಮದ ಸುದ್ದಿ ನಿಮ್ಮೊಡನೆ ಹಂಚಿಕೊಳ್ಳಲ್ಲಿಕ್ಕೆ ಇದೆ.
ಮದುವೆಯ ಹಿಂದಿನ ದಿವಸ ಅಂದರೆ ಜೂನ್ ೨೩ಕ್ಕೆ ಶಿವಮೊಗ್ಗದಲ್ಲಿ ನನ್ನ ಚೊಚ್ಚಲ ಪುಸ್ತಕ ’ಸ್ವೀಟ್ ಡ್ರೀಮ್ಸ್ ಅಂದರೇನು!’ ಬಿಡುಗಡೆ ಆಗಲಿದೆ.

ನನ್ನ ಈ ಎಲ್ಲಾ ಸಂತಸದ ಕ್ಷಣಗಳನ್ನು ಹಂಚಿಕೊಳ್ಳಲ್ಲಿಕ್ಕೆ ನಿಮಗೆ ಮತ್ತೊಮ್ಮೆ ಆಹ್ವಾನ..

ಪ್ರೀತಿಯಿರಲಿ
ಶಿವಶಂಕರ