ಎಲ್ಲರಿಗೂ ನಮಸ್ಕಾರ !
'ಕಾಣದಂತೆ ಮಾಯವಾದನು ನಮ್ಮ ಶಿವ' ಅಂತಾ ನೀವು ಹಾಡು ಹೇಳೋಕೇ ಮುಂಚೆನೇ ನಿಮ್ಮ ಮುಂದೆ ಬಂದು ನಿಂತಿದೀನಿ !
ನೀವು ಶುಭ ಕೋರಿ ಕಳುಹಿಸಿದ ಮೇಲ್ಗಳು, ನೀವು ಪಾತರಗಿತ್ತಿಯಲ್ಲಿ ಬರೆದ ಕಾಮೆಂಟ್ಗಳು, ನನ್ನ ಸಂಭ್ರಮದಲ್ಲಿ ಬಂದು ಭಾಗವಹಿಸಿದ್ದಕ್ಕೆ ನಿಮ್ಮೆಲ್ಲರಿಗೂ ನನ್ನ ಒಲವಿನ ವಂದನೆಗಳು.ನಿಮ್ಮ ಪ್ರೀತಿಯ ಹಾರೈಕೆಗೆ, ನನ್ನ ಮತ್ತು ನನ್ನಾಕೆಯ ನಮನಗಳು.
ಕಳೆದ ಸಲ ಪಾತರಗಿತ್ತಿಯಲ್ಲಿ ಬರೆದಿದ್ದು ನಿಮ್ಮನ್ನು ನನ್ನ ವಿವಾಹಕ್ಕೆ ಆಹ್ವಾನಿಸುವ ಸಂದರ್ಭದಲ್ಲಿ. ಆದಾದ ನಂತರ ಏನೇಲ್ಲಾ ಆಯ್ತು..
ಇಷ್ಟು ದಿವಸ ಕನಸು-ಕವನ-ಕನವರಿಕೆಗಳಲ್ಲಿ ಕಾಡುತಿದ್ದ ನನ್ನ ಹುಡುಗಿ ಕೊನೆಗೂ ನನ್ನ ವರಿಸಿದ್ದು ಅದೇ ಜೂನ್ ೨೪ ರಂದು. ಮದುವೆಯೆಂಬ ಆ ವಿಶಿಷ್ಟ ಅನುಭವ..ಸಂಬಂಧ, ಸಂಭ್ರಮ, ಸಲ್ಲಾಪ, ಸಡಗರಗಳ ಒಂದು ಹೊಸ ಲೋಕವದು.
ಇಷ್ಟು ದಿವಸ ಕೇವಲ ಪೋನು-ಮೇಲ್-ಕವನಗಳಲ್ಲಿ ಹರಿಯುತ್ತಿದ್ದ ಭಾವನಾ ಲಹರಿಗೆ , ಮನದಲ್ಲಿದ್ದವರು ಎದುರಿಗೆ ಬಂದಾಗ ಆದ ಸಂಭ್ರಮ...ಅವಿಸ್ಮರಣೀಯ. ಪ್ರೀತಿಯ ತೊರೆಯಲ್ಲಿ ಬೊಗಸೆಯಲ್ಲಿ ಕುಡಿದ ಅಮೃತವೂ ಅವಿಸ್ಮರಣೀಯ..
ಮದುವೆಯ ಹಿಂದಿನ ದಿವಸ ನನ್ನ ಹುಡುಗಿಯ ಶಿವಮೊಗ್ಗೆಯಲ್ಲಿ ನಡೆದಿತ್ತು ನನ್ನ ಪುಸ್ತಕ್ 'ಸ್ವೀಟ್ ಡ್ರೀಮ್ಸ್ ಅಂದ್ರೇನು !'ಬಿಡುಗಡೆ. ಅದಾಗಿ ಮರುದಿನವೇ ನನ್ನ ಜೀವನದ ಅತೀ ಮಧುರ ಸ್ವೀಟ್ ಡ್ರೀಮ್ ನನ್ನ ಭಾಳಸಂಗಾತಿಯಾಗಿದ್ದು....
ಅಲ್ಲಿ ಸ್ಪಲ್ಪ ಕಾಲ ಇದ್ದು ನಾವು ಮರಳಿದೆವು ದೂರದ ಅಮೇರಿಕೆಗೆ...
ಇಲ್ಲಿ ನಮ್ಮ ಪುಟ್ಟ ಗೂಡಿನಲ್ಲಿ ನಮ್ಮ ಬಾಳಪಯಣ ಸುಂದರವಾಗಿ ಸಾಗುತಿದೆ...
ಮತ್ತೆ ಸಿಗುವೇ..ಅಲ್ಲಿಯವರಿಗೆ ಪ್ರೀತಿಯಿರಲಿ
Showing posts with label wedding. Show all posts
Showing posts with label wedding. Show all posts
Thursday, August 09, 2007
Wednesday, June 20, 2007
ಆತ್ಮೀಯ ಆಹ್ವಾನ
ತುಂಗೆಯ ತೀರದಿಂದ ತಂದು ಮಲ್ಲಿಗೆ ಸಸಿಯೊಂದ
ಮನದ ಅಂಗಳದಿ ಹಚ್ಚಿ ಪ್ರೀತಿಯ ಸಿಂಚನ ಮಾಡಲು
ಅರಳಿದೆ ಮೊಗ್ಗು ನನ್ನ ಎದೆಯಂಗಳದಿ
ಪ್ರೀತಿಯ ಪರಿಮಳ ಬೀರಲಿದೆ ನನ್ನ ಮನೆಯಂಗಳದಿ
ಹೀಗೆ ನನ್ನ ಎದೆಯ ತುಂಬಾ ಮೋಹಕ ಸುವಾಸನೆ ಸೂಸುತ್ತಿರುವ ಆ ನನ್ನ ಮಧುರ ಮಲ್ಲಿಗೆಯ ಹೆಸರು ಶಿಲ್ಪಶ್ರೀ.
ಜೀವನದ ಎಲ್ಲಾ ವಸಂತ-ಗ್ರೀಷ್ಮ ಖುತುಗಳನ್ನು ಹಂಚಿಕೊಳ್ಳಲ್ಲಿರುವ ನನ್ನ ಪ್ರೀತಿಯ ಹುಡುಗಿಯನ್ನು ಬಾಳಸಂಗಾತಿಯಾಗಿ ಸ್ಪೀಕರಿಸುವ ಶುಭ ಮೂಹೂರ್ತಕ್ಕೆ ನಿಮಗೆ ಆತ್ಮೀಯ ಆಹ್ವಾನ
ಮುಹೂರ್ತ: ಭಾನುವಾರ ೨೪ ಜೂನ್ ೨೦೦೭, ಬೆಳಿಗ್ಗೆ ೧೦:೩೦ - ೧೧:೩೦
ಸ್ಥಳ: ವೀರಶೈವ ಕಲ್ಯಾಣ ಮಂದಿರ, ಶಿವಮೊಗ್ಗ
ಆರತಕ್ಷತೆ:ಶುಕ್ರವಾರ ೨೯ ಜೂನ್ ೨೦೦೭, ಸಂಜೆ ೭:೦೦ - ೧೦:೦೦
ಸ್ಥಳ:ನ್ಯೂ ಆತಿಥ್ಯ ರೆಸ್ಟೋರೆಂಟ್,ಗಾಂಧೀ ಬಜಾರ್,ಬೆಂಗಳೂರು
ಅಂದಾಗೆ ಇದರ ಜೊತೆ ಇನ್ನೊಂದು ಸಂಭ್ರಮದ ಸುದ್ದಿ ನಿಮ್ಮೊಡನೆ ಹಂಚಿಕೊಳ್ಳಲ್ಲಿಕ್ಕೆ ಇದೆ.
ಮದುವೆಯ ಹಿಂದಿನ ದಿವಸ ಅಂದರೆ ಜೂನ್ ೨೩ಕ್ಕೆ ಶಿವಮೊಗ್ಗದಲ್ಲಿ ನನ್ನ ಚೊಚ್ಚಲ ಪುಸ್ತಕ ’ಸ್ವೀಟ್ ಡ್ರೀಮ್ಸ್ ಅಂದರೇನು!’ ಬಿಡುಗಡೆ ಆಗಲಿದೆ.
ನನ್ನ ಈ ಎಲ್ಲಾ ಸಂತಸದ ಕ್ಷಣಗಳನ್ನು ಹಂಚಿಕೊಳ್ಳಲ್ಲಿಕ್ಕೆ ನಿಮಗೆ ಮತ್ತೊಮ್ಮೆ ಆಹ್ವಾನ..
ಪ್ರೀತಿಯಿರಲಿ
ಶಿವಶಂಕರ
ಮನದ ಅಂಗಳದಿ ಹಚ್ಚಿ ಪ್ರೀತಿಯ ಸಿಂಚನ ಮಾಡಲು
ಅರಳಿದೆ ಮೊಗ್ಗು ನನ್ನ ಎದೆಯಂಗಳದಿ
ಪ್ರೀತಿಯ ಪರಿಮಳ ಬೀರಲಿದೆ ನನ್ನ ಮನೆಯಂಗಳದಿ
ಹೀಗೆ ನನ್ನ ಎದೆಯ ತುಂಬಾ ಮೋಹಕ ಸುವಾಸನೆ ಸೂಸುತ್ತಿರುವ ಆ ನನ್ನ ಮಧುರ ಮಲ್ಲಿಗೆಯ ಹೆಸರು ಶಿಲ್ಪಶ್ರೀ.
ಜೀವನದ ಎಲ್ಲಾ ವಸಂತ-ಗ್ರೀಷ್ಮ ಖುತುಗಳನ್ನು ಹಂಚಿಕೊಳ್ಳಲ್ಲಿರುವ ನನ್ನ ಪ್ರೀತಿಯ ಹುಡುಗಿಯನ್ನು ಬಾಳಸಂಗಾತಿಯಾಗಿ ಸ್ಪೀಕರಿಸುವ ಶುಭ ಮೂಹೂರ್ತಕ್ಕೆ ನಿಮಗೆ ಆತ್ಮೀಯ ಆಹ್ವಾನ
ಮುಹೂರ್ತ: ಭಾನುವಾರ ೨೪ ಜೂನ್ ೨೦೦೭, ಬೆಳಿಗ್ಗೆ ೧೦:೩೦ - ೧೧:೩೦
ಸ್ಥಳ: ವೀರಶೈವ ಕಲ್ಯಾಣ ಮಂದಿರ, ಶಿವಮೊಗ್ಗ
ಆರತಕ್ಷತೆ:ಶುಕ್ರವಾರ ೨೯ ಜೂನ್ ೨೦೦೭, ಸಂಜೆ ೭:೦೦ - ೧೦:೦೦
ಸ್ಥಳ:ನ್ಯೂ ಆತಿಥ್ಯ ರೆಸ್ಟೋರೆಂಟ್,ಗಾಂಧೀ ಬಜಾರ್,ಬೆಂಗಳೂರು
ಅಂದಾಗೆ ಇದರ ಜೊತೆ ಇನ್ನೊಂದು ಸಂಭ್ರಮದ ಸುದ್ದಿ ನಿಮ್ಮೊಡನೆ ಹಂಚಿಕೊಳ್ಳಲ್ಲಿಕ್ಕೆ ಇದೆ.
ಮದುವೆಯ ಹಿಂದಿನ ದಿವಸ ಅಂದರೆ ಜೂನ್ ೨೩ಕ್ಕೆ ಶಿವಮೊಗ್ಗದಲ್ಲಿ ನನ್ನ ಚೊಚ್ಚಲ ಪುಸ್ತಕ ’ಸ್ವೀಟ್ ಡ್ರೀಮ್ಸ್ ಅಂದರೇನು!’ ಬಿಡುಗಡೆ ಆಗಲಿದೆ.
ನನ್ನ ಈ ಎಲ್ಲಾ ಸಂತಸದ ಕ್ಷಣಗಳನ್ನು ಹಂಚಿಕೊಳ್ಳಲ್ಲಿಕ್ಕೆ ನಿಮಗೆ ಮತ್ತೊಮ್ಮೆ ಆಹ್ವಾನ..
ಪ್ರೀತಿಯಿರಲಿ
ಶಿವಶಂಕರ
Subscribe to:
Posts (Atom)